ದಿನಾಂಕ 25.024 ಭಾನುವಾರ ಕೈವಾರದಲ್ಲಿ ಕರ್ನಾಟಕ ಸಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯುತ್ತದೆ. ಸಂಗೀತ ನೃತ್ಯ ಗೀತ ಗಾಯನ ಕವಿಗೋಷ್ಠಿ ಕಾಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಗುರು ಯೋಗಿ ನಾರಾಯಣ ಪ್ರಶಸ್ತಿ ಕನ್ನಡ ಕಾವ್ಯಶ್ರೀ ಪ್ರಶಸ್ತಿ ಶಿಕ್ಷಕರ ರತ್ನ ಪ್ರಶಸ್ತಿ ಹೆಮ್ಮೆಯ ಕನ್ನಡಿಗ ಕನ್ನಡತಿ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಾ. ಆರೂಢ ಭಾರತಿ ಸ್ವಾಮಿಗಳು ಉದ್ಘಾಟನಾ ಕಾರ್ಯಕ್ರಮ ನೆರವೇರಿಸಲಿದ್ದಾರೆ. ತಾವೆಲ್ಲರೂ ಸಮಾರಂಭಕ್ಕೆ ಆಗಮಿಸಬೇಕೆಂದು ಕೇಳಿಕೊಳ್ಳುತ್ತೇವೆ.. ಇಂತಿ , ಅಧ್ಯಕ್ಷರು ಡಾ.ಶಿವಣ್ಣ ಜಿ.
ಎಲ್ಲರಿಗೂ ನಮಸ್ಕಾರಗಳು, ಇಂದು, ದಿನಾಂಕ 05:02:2023 ಭಾನುವಾರದಂದು ಮಧ್ಯಾಹ್ನ 01:30 ಕ್ಕೆ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ, ಹಾಸನ ಹಾಗೂ ವಿಚಾರ ಮಂಟಪ ಸಾಹಿತ್ಯ ಬಳಗ ಇವರ ಜಂಟಿ ಸಹಯೋಗದಲ್ಲಿ ತುಮಕೂರು ನಗರದ ಶೆಟ್ಟಿಹಳ್ಳಿ ಗೇಟ್ ಬಳಿಯ ರಾಘವೇಂದ್ರ ಸ್ವಾಮಿ ಮಠದ ಹತ್ತಿರವಿರುವ ಪಿ ಐ ಸೆಂಟರ್ ವಿದ್ಯಾವಿಹಾರ ಸಭಾಂಗಣ ಇಲ್ಲಿ ಶ್ರೀಮತಿ ಆಶಾಕಿರಣ್ ರವರ ಅಪರಾಧಿ ನಾನಲ್ಲ ಪುಸ್ತಕದ ಓದು - ಸಂವಾದ, ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ತುಮಕೂರು ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚು ಆಡಂಬರ, ಅಪವ್ಯಯವಿಲ್ಲದೆ, ವಿಚಾರಪರವಾದ ಓದು - ಸಂವಾದ - ಚಿಂತನೆಗಳ ಮೂಲಕ ಯುವ ಮನಸ್ಸುಗಳಲ್ಲಿ ಸಾಹಿತ್ಯಾಭಿವ್ಯಕ್ತಿಯನ್ನು ಸಾಹಿತ್ಯಾಸಕ್ತಿಯನ್ನು, ಸಮಾಜ ಸೇವಾ ಮನೋಭಾವವನ್ನು ಬೆಳೆಸುವ ಸದ್ದುದೇಶದಿಂದ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಹಾಗೂ ವಿಚಾರ ಮಂಟಪ ಸಾಹಿತ್ಯ ಬಳಗಗಳು ಜಂಟಿಯಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಇದರ ಮುಂದುವರೆದ ಭಾಗವಾಗಿ ನಾಳಿನ ಕಾರ್ಯಕ್ರಮವೂ ನಡೆಯಲಿದೆ. ಎಲ್ಲಾ ಸ್ನೇಹಿತರೂ ಸಾಹಿತ್ಯಾಭಿಮಾನಗಳು ಸದ್ವಿಚಾರಗಳನ್ನು ತಿಳಿಯುವ, ಅರಿಯುವ, ತಿಳಿಸಿ ಪಸರಿಸುವ ಸದುದ್ದೇಶದಿಂದ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕ ಉದಯೋನ್ಮುಖ ಬರಹಗಾರರನ್ನು ಪ್ರೋತ್ಸಾಹಿಸುವ ನಮ್ಮ ಪ್...
ವಿಚಾರ ಮಂಟಪ ಬಳಗದ ವತಿಯಿಂದ ವರುಣ್ರಾಜ್ ಜಿ ಮತ್ತು ಧನುಷ್ ಎಚ್ ಶೇಖರ್ ಇವರು ಸಂಪಾದಿಸಿರುವ ʼಕಾವ್ಯದೀವಿಗೆʼ ಕವನ ಸಂಕಲನವು ಲೋಕಾರ್ಪಣೆಗೆ ಸಿದ್ಧವಾಗಿದೆ. ಕೃತಿಯನ್ನು ಹಾಸನದ ʼಸ್ಪಂದನ ಸಿರಿʼ ಪ್ರಕಾಶನವು ಪ್ರಕಟಿಸುತ್ತಿದ್ದು, ಇದೇ ಭಾನುವಾರ ದಿನಾಂಕ: ೨೫.೦೬.೨೦೨೩ ರಂದು ಹಾಸನದಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆಯ ೧೨ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ʼಕಾವ್ಯದೀವಿಗೆʼ ಕವನ ಸಂಕಲನವು ನಾಡಿನ ವಿವಿಧ ಪ್ರದೇಶಗಳ ಒಟ್ಟು ೬೨ ಯುವ ಬರಹಗಾರರ ಬರಹಗಳನ್ನೊಳಗೊಂಡ ಕೃತಿಯಾಗಿದ್ದು, ಯುವ ಬರಹಗಾರರ ಅಭಿವ್ಯಕ್ತಿಗೆ ವೇದಿಕೆಯನ್ನೊದಗಿಸುವ ಹಾಗೂ ಅವರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ವಿಚಾರ ಮಂಟಪ ಬಳಗವು ೫ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು ಇದರ ನೆನಪಿಗಾಗಿ ʼಕಾವ್ಯದೀವಿಗೆʼಯನ್ನು ಹೊರತರುತ್ತಿದೆ. ಈ ಕೃತಿಗೆ ಅಮರ್ ಬಿ ಇವರ ಮುನ್ನುಡಿಯನ್ನು ಬರೆದಿದ್ದು, ದಾದಪೀರ್ ಜೈಮನ್, ದೇವರಾಜ್ ಹುಣಸೀಕಟ್ಟೆ ಹಾಗೂ ಗೌತಮ್ ಗೌಡ ಇವರು ಆಶಯ ನುಡಿಯನ್ನೂ ಹಾಗೂ ಚಂದನ್ ಡಿ.ಎನ್. ಇವರು ಬೆನ್ನುಡಿಯನ್ನೂ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಾಸನದ ಸಾಹಿತಿ ಶ್ರೀ ಗೊರೂರು ಅನಂತರಾಜು ಅವರು ಪುಸ್ತಕ ಬಿಡುಗಡೆಗೊಳಿಸಿ ಕೃತಿಯನ್ನು ಕುರಿತು ಮಾತನಾಡಲಿದ್ದು, ʼಸ್ಪಂದನ ಸಿರಿʼ ಸಾಹಿತ್ಯ ವೇದಿಕೆಯ ಶ್ರೀಮತಿ ಕಲಾವತಿ ಮಧುಸೂದನ, ಕಾದ...
Comments
Post a Comment